ಕುಸ್ತಿ-ರಾಜ್ಯ ಮಟ್ಟಕ್ಕೆ ಆಯ್ಕೆ

Oct 4, 2024 - 11:13
 0
ಕುಸ್ತಿ-ರಾಜ್ಯ ಮಟ್ಟಕ್ಕೆ ಆಯ್ಕೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

 ಚಡಚಣ: ಇತ್ತಿಚೆಗೆ ಕಲಕೇರಿಯ ಎ.ಕೆ.ಸಿರಸಗಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ೭೦ ಕೆಜಿ ವಿಭಾಗದಲ್ಲಿ ಚಡಚಣದ ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಸಂಕೇತ ಅಲದಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ವಿದ್ಯಾರ್ಥಿಯ ಈ ಸಾಧನೆಗೆ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯ ಮನೋಜ ಕಟಗೇರಿ, ದೈಹಿಕ ಉಪನ್ಯಾಸಕ ಶಿವಾನಂದ ಜಿಗಜೇವಣ  ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.