ವಿಶೇಷಾಂಕ ವರ್ಣರಂಜಿತವಾಗಿ ಮೂಡಿಬಂದಿದೆ : ಸಿಎಂ ವಿಶೇಷ ಕರ್ತವ್ಯಾಧಿಕಾರಿ ಆರ್. ಮಹಾದೇವ ಮೆಚ್ಚುಗೆ

Mar 28, 2025 - 09:40
 0
ವಿಶೇಷಾಂಕ ವರ್ಣರಂಜಿತವಾಗಿ ಮೂಡಿಬಂದಿದೆ  : ಸಿಎಂ ವಿಶೇಷ ಕರ್ತವ್ಯಾಧಿಕಾರಿ ಆರ್. ಮಹಾದೇವ ಮೆಚ್ಚುಗೆ

ಬೆಂಗಳೂರು : ಹಿರಿಯ ಪತ್ರಿಕೋದ್ಯಮಿ ಟಿ ಕೆ ಮಲಗೊಂಡ ಸಂಪಾದಕತ್ವದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ ಹೊರತಂದಿರುವ "ಯುಗಾದಿ ವಿಶೇಷಾಂಕ -೨೦೨೫" ವನ್ನು ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಶೇಷ ಕರ್ತವ್ಯಾಧಿಕಾರಿ ಆರ್. ಮಹಾದೇವ ಅವರು  ಅಧಿಕೃತವಾಗಿ ಬಿಡುಗೊಳಿಸಿದರು.                

ನಂತರ ಮಾತನಾಡಿದ ಅವರು ೧೩೨ ಪುಟದ ಯುಗಾದಿ ವಿಶೇಷಾಂಕ ವರ್ಣರಂಜಿತವಾಗಿ ಮೂಡಿ ಬಂದಿದೆ. ಹಲವಾರು ಆಸಕ್ತಿದಾಯಕ ಮಾಹಿತಿ ನೀಡುವ ಲೇಖನಗಳನ್ನು ಹೊಂದಿದೆ. ಸಮಗ್ರ ಮಾಹಿತಿ ಹೊರಣ ಹೊಂದಿರುವ, ಪ್ರತಿಯೊಬ್ಬರೂ ಓದುವ ವಿಶೇಷಾಂಕ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.        

ಯುಗಾದಿ ವಿಶೇಷಾಂಕದ ಮುಖಪುಟದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ಕಾರ್ಮಿಕ ಇಲಾಖೆಯ ಜಂಟಿ ಕಾರ್ಯದರ್ಶಿ ಡಾ.ಸಂಗಮೇಶ ಉಪಾಸೆ, ಏಷ್ಯಾನೇಟ್ ಸುವರ್ಣನ್ಯೂಸ್ ನಿರೂಪಕಿ ಭಾವನಾ ನಾಗಯ್ಯ, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ ನಿಂಬರಗಿ ಅವರ ಭಾವಚಿತ್ರಗಳಿವೆ.     ಈ ಸಂದರ್ಭದಲ್ಲಿ ಸಂಪಾದಕ ಟಿ ಕೆ ಮಲಗೊಂಡ ಪತ್ರಕರ್ತ ಗುರುರಾಜ ಹೂಗಾರ ಇದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.