ಸುರಪುರ ಮಹಾಸಭೆಗೆ ಪದಾಧಿಕಾರಿಗಳ ನೇಮಕ

Oct 5, 2024 - 00:37
 0
ಸುರಪುರ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ವಿಜಯಪುರ 

ಸುರಪುರ : ಅಖಿಲ ಭಾರತ ವೀರಶೈವ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುರಪುರ ಪಟ್ಟಣದ ಶ್ರೀ. ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ಇಂದು ನಡೆದ ಪ್ರಥಮ ಕಾರ್ಯಾನಿರ್ವಾಹಕ ಸಮಿತಿ ಸಭೆಯಲ್ಲಿ ಸರ್ವಾನು ಮತದಿಂದ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದ್ದು, ಸಹಾಯಕ ಚುನಾವಣಾ ಅಧಿಕಾರಿಗಳಾದ ಶಿವಕುಮಾರ ಮಸ್ಕಿಯವರು ವಿಕ್ಷಕರಾಗಿ ಭಾಗವಹಿಸಿ ಆಯ್ಕೆಯಾದ ನೂತನ ಸದಸ್ಯರಿಗೆ ಪ್ರಮಾಣಪತ್ರ ನೀಡಿ ಅಭಿನಂದಿಸಿದರು.

ಕೇಂದ್ರ ಸಮಿತಿಯ ಆದೇಶಾನುಸಾರ ಆಯ್ಕೆ ಮಾಡಿದ್ದು, ಉಪಾಧ್ಯಕ್ಷರಾಗಿ ಶಿವನಗೌಡ ತಿರುಪತಿ ಬಿರಾದರ ಸೂಗುರು, ಶ್ರೀಮತಿ. ಸುನೀತಾ ಸಿದ್ದನಗೌಡ ಪಾಟೀಲ್ ದೇವಾಪೂರ, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ ಎನ್.ಪಾಟೀಲ್, ಕೋಶಾಧ್ಯಕ್ಷರಾಗಿ ಅಮರಯ್ಯ ಸ್ವಾಮಿ ಕಡ್ಲೆಪ್ಪಮಠ, ಕಾರ್ಯದರ್ಶಿಗಳಾಗಿ ರೆವಣಸಿದ್ದಪ್ಪ ಎಂ. ರೆವಡಿ ಹುಣಸಗಿ, ಶ್ರೀಮತಿ. ಶ್ರೀದೇವಿ ಗೀರಿಶ ಸಜ್ಜನ್ ರಂಗAಪೇಟ ಇವರನ್ನು ಒಮ್ಮತದಿಂದ ಆಯ್ಕೆಮಾಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದ ಮಹಾಸಭೆಯ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮುಂದಿನ ದಿನಗಳಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸುರಪುರ ಮತ್ತು ಹುಣಸಗಿ ತಾಲೂಕಿನ ವೀರಶೈವ ಲಿಂಗಾಯತ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗುತ್ತಿದೆ ಎಂದ ಅವರು ಬರುವ ದಿನಗಳಲ್ಲಿ ಸದಸ್ಯತ್ವ ಅಭಿಯಾನ, ಮಹಿಳಾ ಘಟಕ, ಯುವ ಘಟಕ, ನಗರ ಘಟಕಗಳ ಪ್ರಾರಂಭ ಸೇರಿದಂತೆ ಅನೇಕ ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮಹಾಸಭೆಯ ಕಾರ್ಯಕಾರಿ ಸಮಿತಿಯ ಸದಸ್ಯರಾದ ಮಲ್ಲಣ್ಣ ಸಾಹುಕಾರ ಜಾಲಿಬೆಂಚಿ, ದೇವಿಂದ್ರಪ್ಪಗೌಡ ಮಾಲಗತ್ತಿ, ಮಲ್ಲಿಕಾರ್ಜುನಸ್ವಾಮಿ ಜೆರಟಗಿಮಠ, ಪ್ರಕಾಶ ಅಂಗಡಿ ಹೆಮ್ಮಡಗಿ, ನಿಲಾಂಬಿಕೆ ಸಿದ್ದನಗೌಡ ಪಾಟೀಲ್ ಸೇರಿದಂತೆ ಇತರರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.