ಸರ್ವಜ್ಞ ವಿದ್ಯಾಪೀಠದಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ

Jan 22, 2025 - 08:21
 0
ಸರ್ವಜ್ಞ ವಿದ್ಯಾಪೀಠದಲ್ಲಿ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ

ತಾಳಿಕೋಟೆ :  ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸಲಾಯಿತು. 
         ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ  ಸಿದ್ದನಗೌಡ  ಮಂಗಳೂರ ಅವರು  ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕರ್ಪೂರಾರ್ತಿಯನ್ನು ಮಾಡಿ ಸಮಸ್ತ ಗುರುಬಳಗದವರು ಮತ್ತು ವಿದ್ಯಾರ್ಥಿಗಳು ಸಾಮೂಹಿಕವಾಗಿ ಸೇರಿಕೊಂಡು ವಿಶೇಷ ಪೂಜೆಯನ್ನು ಸಲ್ಲಿಸಿದರು.
       ಈ ಸಮಯದಲ್ಲಿ ಮುಖ್ಯೋಪಾಧ್ಯರಾದ  ಸಂತೋಷ ಪವಾರ, ಶಿಕ್ಷಕರಾದ ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ  ಬಸವರಾಜ  ಚಳ್ಳಗಿ, ಶಾಂತಗೌಡ ಬಿರಾದಾರ, ಭೀಮನಗೌಡ ಸಾಸನೂರ, ರಸೂಲಸಾ ತುರ್ಕನಗೇರಿ, ರವಿಕುಮಾರ ಮಲ್ಲಾಬಾದಿ, ಬಸವರಾಜ ಸವದತ್ತಿ, ಮೌಲಾಲಿ ವಾಲಿಕಾರ, ಸಿದ್ದನಗೌಡ ಮೂದನೂರು, ಶರಣಗೌಡ ಕಾಚಾಪುರ, ಸಿದ್ದನಗೌಡ ಚೌದರಿ, ಸಂಜುಕುಮಾರ ಭಜಂತ್ರಿ, ರಮೇಶ ಪಾಸೋಡಿ, ರೂಪಾ ಪಾಟೀಲ, ಶಿವಲೀಲಾ  ಚುಂಚನೂರ, ದೇವಿಂದ್ರ ಗುಳೆದ, ಅನಿತಾ ಚೌದ್ರಿ, ಅಂಬುಜಾ ಹಜೇರಿ, ರಾಜಬಿ ಬಿದರಿ, ಕಲ್ಪನಾ ಹಜೇರಿ, ನಾಗರತ್ನ ಮೈಲೇಶ್ವರ, ಹೇಮಾ ಕೊಡೆಕಲ್, ನಾಗಶ್ರೀ ನಾಯಕ, ಮೇಘಾ ಪಾಟೀಲ, ಮುಬಿನ ಮುರಾಳ, ತನುಶ್ರೀ ಮಹೇಂದ್ರಕರ, ಶಂಕ್ರಮ್ಮ, ಮುಬಾರಕ ಬನಹಟ್ಟಿ  ಹಾಗೂ  ಗುರು ಬಳಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.